ಅನಾರೋಗ್ಯದಿಂದ ನಿಧನ ಹೊಂದಿದ ಕಾಂಗ್ರೆಸ್ ಮುಖಂಡ, ಬಂಟ್ವಾಳ ಪುರಸಭೆ ಸದಸ್ಯರಾದ ಜನಾರ್ದನ ಚಂಡ್ತಿಮಾರ್ ಅವರ ಬಂಟ್ವಾಳದಲ್ಲಿರುವ ನಿವಾಸಕ್ಕೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರು ಭೇಟಿ ನೀಡಿದರು. ಈ ಸಂದರ್ಭ ಕುಟುಂಬ ಸದಸ್ಯರಿಗೆ ಯು.ಟಿ ಖಾದರ್ ಅವರು ಸಾಂತ್ವನ ಹೇಳಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರು ಜೊತೆಗಿದ್ದರು.