Chikmagalur:  ಖಾಸಗಿ ಬಸ್ ಪಲ್ಟಿ;ಇಬ್ಬರ ಸ್ಥಿತಿ ಗಂಭೀರ;25ಕ್ಕೂ ಅಧಿಕ ಮಂದಿಗೆ ಗಾಯ

Chikmagalur: ಖಾಸಗಿ ಬಸ್ ಪಲ್ಟಿ;ಇಬ್ಬರ ಸ್ಥಿತಿ ಗಂಭೀರ;25ಕ್ಕೂ ಅಧಿಕ ಮಂದಿಗೆ ಗಾಯ


ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನಿ0ದ ಕುದುರೆಮುಖ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. 


ವೀಕೆಂಡ್ ಹಿನ್ನೆಲೆಯಲ್ಲಿ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುವ 40ಕ್ಕೂ ಹೆಚ್ಚು ಯುವಕ  ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗೆ ಬಂದಿದ್ದರು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಗಾಯಾಳುಗಳನ್ನು ಮೂಡಿಗೆರೆ ಹಾಗೂ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 







Ads on article

Advertise in articles 1

advertising articles 2

Advertise under the article