Hassan:ನಿಯಂತ್ರಣ ಕಳೆದುಕೊಂಡು ಜಲಪಾತಕ್ಕೆ ಉರುಳಿ ಬಿದ್ದ ಕಾರು

Hassan:ನಿಯಂತ್ರಣ ಕಳೆದುಕೊಂಡು ಜಲಪಾತಕ್ಕೆ ಉರುಳಿ ಬಿದ್ದ ಕಾರು


ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಉರುಳಿ ಬಿದ್ದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್ಗೆ ಕಾರು ಉರುಳಿ ಬಿದ್ದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಮಲೆನಾಡು ಭಾಗದಲ್ಲಿ ಬಾರಿ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಬಾರಿ ಅನಾಹುತ ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 






Ads on article

Advertise in articles 1

advertising articles 2

Advertise under the article