Mangalore: ಟಿಪ್ಪರ್, ಆಲ್ಟೋ ಕಾರು ಅಪಘಾತ; ಓರ್ವ ಮೃತ್ಯು, ಇಬ್ಬರು ಗಂಭೀರ

Mangalore: ಟಿಪ್ಪರ್, ಆಲ್ಟೋ ಕಾರು ಅಪಘಾತ; ಓರ್ವ ಮೃತ್ಯು, ಇಬ್ಬರು ಗಂಭೀರ


ದಕ್ಷಿಣ ಕನ್ನಡ ಜಿಲ್ಲೆಯ ವೀರಕಂಭ ಗ್ರಾಮದ ಕೆಲಿಂಜ ಎಂಬಲ್ಲಿನ ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಚಾಲಕ ಮೃತಪಟ್ಟು, ಮಗು ಸಹಿತ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತ ಚಾಲಕನನ್ನು ಅನಂತಾಡಿ ಆಶ್ವತ್ತಡಿ ಮೂಲದ ಅನೀಶ್(34) ಎಂದು ಗುರುತಿಸಲಾಗಿದೆ. ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಅನೀಶ್ ಮೃತಪಟಿದ್ದು, ಅವರ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 


Ads on article

Advertise in articles 1

advertising articles 2

Advertise under the article