Mangalore:  ಬಿಜೈ ಭಾರತಿ ಬಿಲ್ಡರ್ಸ್ ಕಚೇರಿ ಶೂಟೌಟ್ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Mangalore: ಬಿಜೈ ಭಾರತಿ ಬಿಲ್ಡರ್ಸ್ ಕಚೇರಿ ಶೂಟೌಟ್ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಸೆರೆ


ಸುಮಾರು 10 ವರ್ಷದಿಂದ ತಲೆಮರೆಸಿಕೊಂಡಿದ್ದ ಶೂಟೌಟ್ ಪ್ರಕರಣದ ಆರೋಪಿಯನ್ನು ಮಂಗಳೂರಿನ ಉರ್ವಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ಬಂಧಿತ ಆರೋಪಿ. 

ಭಾರತಿ ಬಿಲ್ಡರ್ಸ್ ಕಚೇರಿಗೆ ಭೂಗತ ಪಾತಕಿ ರವಿ ಪೂಜಾರಿ ಸಹಚರರು 2014ರಲ್ಲಿ ಶೂಟೌಟ್ ನಡೆಸಿದ್ದರು. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಯಾಗಿದ್ದ ಕರಾಡ್ ಗಣೇಶ್ 2015ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಮಂಗಳೂರಿನ ಜೆಎಂಎಫ್‌ಸಿ 3ನೇ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 

Ads on article

Advertise in articles 1

advertising articles 2

Advertise under the article