
Uppinangady: ಕೌಟುಂಬಿಕ ಕಲಹ:ಪತ್ನಿಯನ್ನು ಇರಿದು ಕೊಂದ ಪತಿ
17/07/2025 07:43 AM
ಕೌಟುಂಬಿಕ ಕಲಹದಿಂದ ಪತಿಯೇ ಪತ್ನಿಯನ್ನು ಇರಿದು ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ಜುಲೈ 17ರಂದು ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಝೀನತ್ (40) ಎಂದು ಗುರುತಿಸಲಾಗಿದೆ. ಆಕೆಯ ಪತಿ ರಫೀಕ್ (47) ಕೊಲೆಗೈದಿದ್ದಾನೆ.
ಜುಲೈ 17ರಂದು ಬೆಳಗ್ಗೆ ದಂಪತಿ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ರಫೀಕ್ ಪತ್ನಿ ಝೀನತ್ ರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ.ವಿದೇಶದಲ್ಲಿ ಉದ್ಯೋಗದಲ್ಲಿದ್ದ ರಫೀಕ್ ಎರಡು ವರ್ಷದ ಹಿಂದೆ ಊರಿಗೆ ಬಂದು ತೆಕ್ಕಾರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.