Dharmasthala: ಸರಣಿ ಶವಗಳ ಹೂತಿರುವ ಪ್ರಕರಣ; 7 ನೇ ಪಾಯಿಂಟ್ನಲ್ಲಿ ಉತ್ಖನನ ಕಾರ್ಯ
01/08/2025
ಧರ್ಮಸ್ಥಳದಲ್ಲಿ ಸರಣಿ ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬ0ಧಿಸಿ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ನಾಲ್ಕನೇ ದಿನವೂ ಕಾರ್ಯಾಚರಣೆ ಮುಂದುವರಿಸಿದೆ.
ದೂರುದಾರ ಗುರುತಿಸಿದ 7 ನೇ ಸ್ಥಳದಲ್ಲಿ ಅಗೆಯುವ ಕಾರ್ಯ ಆರಂಭಿಸಲಾಗಿದೆ. ಆದರೆ 7 ನೇ ಪಾಯಿಂಟ್ನಲ್ಲಿ ಯಾವುದೇ ಕಳೇಬರಗಳು ಪತ್ತೆಯಾಗಿಲ್ಲ ಎನ್ನಲಾಗುತ್ತಿದೆ. ಗೌಪ್ಯತೆಯ ದೃಷ್ಟಿಯಿಂದ ಉತ್ಖನನ ನಡೆಸುತ್ತಿರುವ ಪ್ರದೇಶದಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಇನ್ನು ದೂರುದಾರ ಗುರುತಿಸಿದ್ದ ಜಾಗಗಳ ಪೈಕಿ 7 ಕಡೆಗಳಲ್ಲಿ ಅಗೆಯಲಾಗಿದೆ. ಅದರಲ್ಲಿ 6 ನೇ ಪಾಯಿಂಟ್ನಲ್ಲಿ ಮಾನವನ ಮೂಳೆಗಳು ಪತ್ತೆಯಾಗಿದ್ದವು. ಇದೀಗ 7 ಪಾಯಿಂಟ್ನಲ್ಲಿ ಅಗೆಯಲಾಗಿದ್ದು, ಯಾವುದೇ ಕುರುಹುಗಳು ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ.