
Mangalore: ಮಹಿಳಾ ಕಾಂಗ್ರೆಸ್ ಪದಗ್ರಹಣ ಕಾರ್ಯಕ್ರಮ; ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಉದ್ಘಾಟನೆ
19/08/2025
ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ನ ಪದಗ್ರಹಣ ಸಮಾರಂಭವು ಮಂಗಳೂರಿನ ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ಆಗಸ್ಟ್ 19ರಂದು ನಡೆಯಿತು.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿಯವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಮಹಿಳಾ ನಗರ ಅಧ್ಯಕ್ಷೆ ಅಪ್ಪಿ ಹಾಗೂ ಗ್ರಾಮಾಂತರ ಅಧ್ಯಕ್ಷೆ ಉಷಾ ಅಂಚನ ಅವರಿಗೆ ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಮಾಜಿ ಮೇಯರ ಶಶಿಧರ ಹೆಗ್ಡೆ, ಕಾರ್ಯದರ್ಶಿ ಮಂಜುಳ ನಾಯಕ್, ನಮಿತಾ.ಡಿ.ರಾವ್ ಹಾಗು ಇನ್ನಿತರರು ಉಪಸ್ಥಿತರಿದ್ದರು.