New Delhi: ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ನ್ಯಾ. ಸುದರ್ಶನ್ ರೆಡ್ಡಿ ಆಯ್ಕೆ

New Delhi: ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ನ್ಯಾ. ಸುದರ್ಶನ್ ರೆಡ್ಡಿ ಆಯ್ಕೆ


ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟವು ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಮೂರ್ತಿ ಮತ್ತು ಗೋವಾದ ಮೊದಲ ಲೋಕಾಯುಕ್ತ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.

ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಚುನಾವಣೆಗೆ ಸುದರ್ಶನ್ ರೆಡ್ಡಿ ಅವರು ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲ, ಬಿಜೆಪಿಯ ಹಿರಿಯ ನಾಯಕ ಸಿಪಿ ರಾಧಾಕೃಷ್ಣನ್ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ. 


Ads on article

Advertise in articles 1

advertising articles 2

Advertise under the article