Puttur: ಮನೆಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ

Puttur: ಮನೆಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ


ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಕನಡ್ಕ ಎಂಬಲ್ಲಿ ನಡೆದಿದೆ. 

ಕನಡ್ಕ ನಿವಾಸಿ ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ(22) ಆತ್ಮಹತ್ಯೆ ಮಾಡಿಕೊಂಡವರು. ಅವರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ತೇಜಸ್ವಿನಿ ಅವರು ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮೃತರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.


Ads on article

Advertise in articles 1

advertising articles 2

Advertise under the article