
Udupi: ಶಾಲಾ ವಾಹನ ಚಾಲಕನಿಗೆ ಹೃದಯಾಘಾತ; ಆಸ್ಪತ್ರೆಗೆ ಸಾಗಿಸುವ ವೇಳೆ ಮೃತ್ಯು (video)
01/08/2025
ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಟಿ.ಟಿ ವಾಹನದ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತ ಚಾಲಕನನ್ನು ಕಾರ್ಕಳ ನೀರೆ ಬೈಲೂರಿನ ಮೊಯ್ದಿನ್ ಬಾವ (65ವ) ಎಂದು ಗುರುತಿಸಲಾಗಿದೆ. ಮಣಿಪಾಲದ ಪ್ರಗತಿನಗರ ಕೇಂದ್ರೀಯ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ ವಾಹನದ ಚಾಲಕ ಮೊಯ್ದಿನ್ ಬಾವ ಅವರು, ಉಡುಪಿಯ ಮಾರುತಿ ವಿಥಿಕಾ ಬಳಿ ತಲುಪುತ್ತಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಶಾಲಾ ವಾಹನವನ್ನು ರಸ್ತೆ ಬದಿ ನಿಲ್ಲಿಸಿದ್ದ ಚಾಲಕನನ್ನು ಗಮನಿಸಿದ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು, ಅಂಬ್ಯುಲೆನ್ಸ್ ಸಹಾಯದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಮೊಯ್ದಿನ್ ಬಾವಾ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.