Udupi: ನಕಲಿ ಚಿನ್ನ ಅಡವಿಡುವ ಜಾಲ; ಚಿನ್ನ ಬೆಳ್ಳಿ ಕೆಲಸಗಾರರಿಂದ ಎಸ್ಪಿಗೆ ದೂರು

Udupi: ನಕಲಿ ಚಿನ್ನ ಅಡವಿಡುವ ಜಾಲ; ಚಿನ್ನ ಬೆಳ್ಳಿ ಕೆಲಸಗಾರರಿಂದ ಎಸ್ಪಿಗೆ ದೂರು


ಉಡುಪಿಯ ಬ್ಯಾಂಕ್, ಫೈನಾನ್ಸ್ ಹಾಗೂ ಸಹಕಾರಿ ಸೊಸೈಟಿಗಳಲ್ಲಿ ನಕಲಿ ಚಿನ್ನ ಅಡವಿಡುವ ಜಾಲವೊಂದು ಕಾರ್ಯಾಚರಿಸುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಂ ಶಂಕರ್ ಅವರಿಗೆ ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು
.

ನಕಲಿ ಆಭರಣಗಳನ್ನು ಹಣಕಾಸು ಸಂಸ್ಥೆಗಳಲ್ಲಿ ಗಿರವಿ ಇಡುವುದರಿಂದಾಗಿ ಜಿಲ್ಲೆಯ ಚಿನ್ನ ಬೆಳ್ಳಿ ಕೆಲಸಗಾರರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಂಘದ ಸದಸ್ಯರು ಮನವಿ ಮಾಡಿದರು. ಸಂಘದ ಅಧ್ಯಕ್ಷ ರವಿಚಂದ್ರ ಆಚಾರ್ಯ ಮಾರಾಳಿ, ಗೌರವಾಧ್ಯಕ್ಷ ಬಾಲಕೃಷ್ಣ ಆಚಾರ್ಯ, ಕಾರ್ಯದರ್ಶಿ ರಘುನಾಥ ಆಚಾರ್ಯ ಮೊದಲಾದವರು ಇದ್ದರು.  


Ads on article

Advertise in articles 1

advertising articles 2

Advertise under the article