Bangalore: ಅಳಂದ ಕ್ಷೇತ್ರದಲ್ಲಿ ಅಕ್ರಮವಾಗಿರುವುದು ಸತ್ಯ; ಶರಣ ಪ್ರಕಾಶ್ ಪಾಟೀಲ್ ಸಮರ್ಥನೆ
Thursday, September 18, 2025
ಆಳಂದ ಕ್ಷೇತ್ರದಲ್ಲಿ ಅಕ್ರಮ ಆಗಿರೋದು ಸತ್ಯ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ರಾಹುಲ್ ಗಾಂಧಿ ಆರೋಪವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆ0ಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿ.ಆರ್.ಪಾಟೀಲ್ ಆಳಂದದಲ್ಲಿ ಅಕ್ರಮ ಆಗಿತ್ತು ಅಂತ ದೂರು ಕೊಟ್ಟಿದ್ದರು. ನಾನು, ಪ್ರಿಯಾಂಕ್ ಎಲೆಕ್ಷನ್ ಕಮೀಷನ್ಗೆ ದೂರು ಕೊಟ್ಟಿದ್ದೆವು. ವೋಟ್ ಎನ್ ರೋಲ್ ಮಾಡೋಕೆ ದೂರು ಕೊಡಲಾಗಿತ್ತು. ಅಕ್ರಮದ ಆರೋಪ ಮಾಡಿದಾಗ ಅದನ್ನ ಸ್ಟಾಪ್ ಮಾಡಿದ್ದರು. ಆದರೆ ಯಾವುದೇ ಆಕ್ಷನ್ ತೆಗೆದುಕೊಳ್ಳಲಿಲ್ಲ. ರಾಹುಲ್ ಗಾಂಧಿಯವರ ಮಾತಿನಲ್ಲಿ ಸತ್ಯವಿದೆ ಎಂದು ಹೇಳಿದ್ದಾರೆ.