.jpeg)
Udupi: ಸೈಫುದ್ದೀನ್ ಕೊಲೆ ಪ್ರಕರಣ; ಮೂವರು ಆರೋಪಿಗಳು ಪೊಲೀಸರಿಗೆ ಶರಣು
Saturday, September 27, 2025
ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣದ ಮೂವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎಕೆಎಂಎಸ್ ಬಸ್ ಚಾಲಕ ಅಬ್ದುಲ್ ಶುಕೂರು, ಫೈಝಲ್ ಹಾಗೂ ಶರೀಫ್ ಆರೋಪಿಗಳಾಗಿದ್ದು, ಪೊಲೀಸರಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಪೊಲೀಸರು ತನಿಖೆಯ ನಿಟ್ಟಿನಲ್ಲಿ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.
ಈ ಮೂವರು ಆರೋಪಿಗಳು ಕೂಡಾ ಸೈಫುದ್ದೀನ್ ನ ಜೊತೆಗಿದ್ದವರೇ ಎಂದು ತಿಳಿದು ಬಂದಿದೆ. ಜೊತೆಗಿದ್ದವರಿಗೇ ಸುಪಾರಿ ನೀಡಿ ಕೊಲೆ ಮಾಡಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆರೋಪಿಗಳನ್ನು ಮಲ್ಪೆ ಠಾಣಾ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.