-->
ಕಂದಕಕ್ಕೆ ಉರುಳಿದ ಶಬರಿಮಲೆ ಯಾತ್ರಾರ್ಥಿಗಳ ಬಸ್; ಓರ್ವ ಸಾವು, ಹಲವರಿಗೆ ಗಾಯ

ಕಂದಕಕ್ಕೆ ಉರುಳಿದ ಶಬರಿಮಲೆ ಯಾತ್ರಾರ್ಥಿಗಳ ಬಸ್; ಓರ್ವ ಸಾವು, ಹಲವರಿಗೆ ಗಾಯ


ಶಬರಿಮಲೆ ಯಾತ್ರಾರ್ಥಿಗಳು ಸಂಚರಿಸುತ್ತಿದ್ದ ಬಸ್ಸು ಕಂದಕಕ್ಕೆ ಉರುಳಿ ಬಿದ್ದು, ಓರ್ವ ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾಸರಗೋಡಿನ ಚಿತ್ತರಿಕ್ಕಾಲ್ ಸಮೀಪ ನಡೆದಿದೆ.

ಮೃತರನ್ನು ಮೈಸೂರಿನ ಹರೀಶ್ ಎಂದು ಗುರುತಿಸಲಾಗಿದೆ.

ಮೈಸೂರಿನಿಂದ ಈ ಬಸ್ಸು ಶಬರಿಮಲೆಗೆ ತೆರಳುತ್ತಿದ್ದು, ರಸ್ತೆಯಿಂದ 30 ಅಡಿ ಯಷ್ಟು ಆಳಕ್ಕೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ನಾಗರಿಕರು ಹಾಗೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನಲ್ಲಿ 50 ಜನ ಯಾತ್ರಾರ್ಥಿಗಳು ಇದ್ದರು ಎಂದು ತಿಳಿದು ಬಂದಿದೆ.

Ads on article

Advertise in articles 1

advertising articles 2

Advertise under the article