-->
 ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ; ಐವರ ಬಂಧನ

ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ; ಐವರ ಬಂಧನ


ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಗ್ರಾಪಂ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ತಡರಾತ್ರಿ ನಡೆದಿದೆ. 

ಸಖರಾಯಪಟ್ಟಣ ಗ್ರಾಪಂ ಸದಸ್ಯ ಗಣೇಶ್ ಗೌಡ(38) ಕೊಲೆಯಾದವರು. ಪ್ರಕರಣಕ್ಕೆ ಸಂಬ0ಧಿಸಿ ಆರೋಪಿಗಳಾದ ಸಂಜಯ್, ಭೂಷಣ್, ಮಿಥುನ್ ಸೇರಿದಂತೆ ಐವರು ಹಿಂದೂ ಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಸಖರಾಯಪಟ್ಟಣದಲ್ಲಿ ಎರಡು ದಿನಗಳ ಹಿಂದೆ ದತ್ತ ಜಯಂತಿಯ ಬ್ಯಾನರ್ ತೆರವು ವಿಚಾರವಾಗಿ ಎರಡು ತಂಡಗಳ ಮಧ್ಯೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಈ ತಂಡಗಳ ಮಧ್ಯೆ ಶುಕ್ರವಾರ ರಾತ್ರಿಯೂ ಸಖರಾಯಪಟ್ಟಣ ಬಾರ್ ಬಳಿ ಗಲಾಟೆ ನಡೆದಿತ್ತು. ಇದಾಗಿ ಅರ್ಧ ಗಂಟೆಯ ಬಳಿಕ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ಗಣೇಶ್ ಗೌಡರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಕಲ್ಮರಡಿ ಮಠದ ರಸ್ತೆಯಲ್ಲಿ ಗಣೇಶ್ ಗೌಡ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕಿನಲ್ಲಿ ಅಡ್ಡಗಟ್ಟಿದ ಎಂಟು ಮಂದಿಯಿದ್ದ ತಂಡ ಅವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ದಾಳಿ ಮಾಡಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಆರೋಪಿಗಳಲ್ಲಿ ಸಂಜಯ್ ಎಂಬಾತನಿಗೂ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆ ನಡೆದಿರುವ ಸಖರಾಯಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ಐವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article