ಜ.16: ಪರಶುರಾಮ ದ್ವಾರದ ಗುದ್ದಲಿ ಪೂಜೆ
Thursday, January 15, 2026
ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥರ ಸಂಕಲ್ಪದOತೆ ರಾಷ್ಟ್ರೀಯ ಹೆದ್ದಾರಿ 66 ಅಂಬಾಗಿಲು ಜಂಕ್ಷನ್ ಬಳಿ ಪರಶುರಾಮ ದ್ವಾರವನ್ನು ನಿರ್ಮಿಸಲು ಸಂಕಲ್ಪಿಸಿದ್ದಾರೆ.
ಜ. 16ರಂದು ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನೂತನ ದ್ವಾರದ ಗುದ್ದಲಿ ಪೂಜೆ ಶ್ರೀ ಶ್ರೀ ವೇದವರ್ಧನ ತೀರ್ಥರ ಉಪಸ್ಥಿತಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ ಪಾಲ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ, ದಿವಾನರಾದ ಡಾ. ಉದಯಕುಮಾರ ಸರಳತ್ತಾಯ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.