ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ; ಕಾಲಿಗೆ ಗಂಭೀರ ಗಾಯ
Friday, January 16, 2026
ಬೆಳ್ತಂಗಡಿಯ ಕನ್ಯಾಡಿ 1 ಗ್ರಾಮದ ಅಂಡೀರುಮಾರು ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಚಿರತೆ ದಾಳಿಯಿಂದ ಗಾಯಗೊಂಡಿದ್ದಾರೆ.
ಮOಜಪ್ಪ ನಾಯ್ಕ ಇಂದು ಬೆಳಗ್ಗೆ 8:15ರ ಸುಮಾರಿಗೆ ಮನೆಯ ಅಂಗಳದಲ್ಲಿ ನಿಂತಿದ್ದ ವೇಳೆ ಏಕಾಏಕಿ ಚಿರತೆಯೊಂದು ನುಗ್ಗಿ ದಾಳಿ ನಡೆಸಿದೆ. ಹತ್ತಿರದ ಅಡಿಕೆ ಮರವನ್ನೇರಿ ಅವರು ಜೀವ ಉಳಿಸಿಕೊಂಡಿದ್ದಾರೆ.
ಈ ವೇಳೆ ಮಂಜಪ್ಪ ನಾಯ್ಕ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.