ಹುತಾತ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕೇಂದ್ರಸ್ಥಾನದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿ ಹುತಾತ್ಮರನ್ನು ಸ್ಮರಿಸಲಾಯಿತು. ದೇಶಕ್ಕಾಗಿ ಪ್ರಾಣ ಬಲಿದಾನಗೈದವರ ಸ್ಮರಣಾರ್ಥವಾಗಿ ಮೌನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳು ಹಾಗೂ ಲಿಪಿಕ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.