-->
ಕಂಬಳದಲ್ಲಿ ಬಹುಮಾನ ಗೆದ್ದ ಕೋಣಗಳ ಮಾಲಕರಿಗೆ ಹಣಕ್ಕೆ ಬೇಡಿಕೆ; ಮೂವರ ಬಂಧನ

ಕಂಬಳದಲ್ಲಿ ಬಹುಮಾನ ಗೆದ್ದ ಕೋಣಗಳ ಮಾಲಕರಿಗೆ ಹಣಕ್ಕೆ ಬೇಡಿಕೆ; ಮೂವರ ಬಂಧನ


ಮೂಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣಗಳ ಮಾಲಕರಿಗೆ ಹಣಕ್ಕಾಗಿ ಪೀಡಿಸುತ್ತಿದ್ದ ಮೂವರು ಆರೋಪಿಗಳನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. 

ಶ್ಯಾಮ ಸುಂದರ್ ಶೆಟ್ಟಿ, ಅಕ್ಷಯ್ ಪೂಜಾರಿ ಹಾಗೂ ಸುವಿನ್ ಕಾಂಚನ್ ಬಂಧಿತರು.  ಅಂಗಾರಕಟ್ಟೆ ಕೆಂಚನಕೆರೆ ನಿವಾಸಿ ಸಂಶುದ್ದೀನ್ ಅವರಿಗೆ ಈ ಮೂವರು ಆರೋಪಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ತಿಳಿದು ಬಂದಿದೆ. ಸಂಶುದ್ದೀನ್ ಅವರು ಮುಂಬೈಯಲ್ಲಿ ನೆಲೆಸಿರುವ ಉದ್ಯಮಿಯೊಬ್ಬರಿಗೆ ಸೇರಿದ ಗದ್ದೆ, ತೋಟ ಹಾಗೂ ಮನೆಯನ್ನು ನೋಡಿಕೊಳ್ಳುತ್ತಿದ್ದರು. ಮೂಲ್ಕಿ ಅರಸು ಕಂಬಳದಲ್ಲಿ ಸಂಶುದ್ದೀನ್ ತಂದಿದ್ದ ಕೋಣಗಳಿಗೆ ಬಹುಮಾನ ಲಭಿಸಿದ್ದು, ಅದರಲ್ಲಿ ದೊರೆತ ಬಂಗಾರದ ಸರ ಹಾಗೂ ಹಣವನ್ನು ನೀಡುವಂತೆ ಆರೋಪಿಗಳು ಬೆದರಿಕೆಯೊಡ್ಡಿದ್ದಾರೆ. ಅಲ್ಲದೇ ನೀನು ದನಗಳನ್ನು ಕಡಿಯಲು ಕಸಾಯಿಖಾನೆಗೆ ಕೊಡುತ್ತೀಯಲ್ಲ ಎಂದು ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. 

Ads on article

Advertise in articles 1

advertising articles 2

Advertise under the article