-->
 ಮನೆ ಬಿಟ್ಟು ಬಂದು ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕಿಯ ರಕ್ಷಣೆ (Video)

ಮನೆ ಬಿಟ್ಟು ಬಂದು ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕಿಯ ರಕ್ಷಣೆ (Video)


ಹಳೆಬೀಡಿನಿಂದ ಮನೆ ಬಿಟ್ಟು ಉಡುಪಿಗೆ ಬಂದಿದ್ದ ಬಾಲಕಿಯೊಬ್ಬಳನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿದ್ದಾರೆ. 

ಅಪ್ರಾಪ್ತ ಬಾಲಕಿ ಮನೆಯವರೊಂದಿಗೆ ಮುನಿಸಿಕೊಂಡು ಹಳೆಬೀಡಿನಿಂದ ಉಡುಪಿಗೆ ಬಂದಿದ್ದಳು. ಉಡುಪಿಯ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇದ್ದ ಬಾಲಕಿಯ ಚಲನವಲನ ಗಮನಿಸಿದ ಪ್ರೇಮಾ ರಾಮಚಂದ್ರ ಎಂಬವರು ಬಾಲಕಿಯನ್ನು ವಿಚಾರಿಸಿದ್ದಾರೆ. ಈ ವೇಳೆ ಮನೆ ಬಿಟ್ಟು ಬಂದಿರುವುದಾಗಿ ಬಾಲಕಿ ತಿಳಿಸಿದ್ದಾಳೆ. ಪ್ರೇಮ ರಾಮಚಂದ್ರ ಅವರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದು, ತಕ್ಷಣ ನೆರವಿಗೆ ಬಂದ ಒಳಕಾಡು ಅವರು ನಗರ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಾಲಕಿಗೆ ದೊಡ್ಡಣಗುಡ್ಡೆಯ ಬಾಲಕಿಯರ ಬಾಲ ಮಂದಿರದಲ್ಲಿ ಪುರ್ನವಸತಿ ಕಲ್ಪಿಸಲಾಯಿತು, ಕಾರ್ಯಚರಣೆಗೆ ಹರೀಶ್ ಪೂಜಾರಿ ಉದ್ಯಾವರ ಸಹಕರಿಸಿದರು.

ಬಾಲಕಿ ನಾಪತ್ತೆಯಾದ ಬಗ್ಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಳೇಬೀಡು ಪೋಲಿಸರು ಬಾಲಕಿ ಉಡುಪಿಯಲ್ಲಿ ಪತ್ತೆಯಾಗಿರುವ ಮಾಹಿತಿ ತಿಳಿದು ಬಾಲಕಿಯ ತಾಯಿಯೊಂದಿಗೆ ಬಂದಿದ್ದರು. ಈ ವೇಳೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಳೇಬೀಡಿನ ಪೋಲಿಸರಿಗೆ ಬಾಲಕಿಯನ್ನು ಒಪ್ಪಿಸಿದರು. ತಾಯಿಯೊಂದಿಗೆ ತೆರಳಲು ಒಪ್ಪದ ಕಾರಣದಿಂದ ಬಾಲಕಿಗೆ ಚಿಕ್ಕಮಗಳೂರು ಬಾಲಕಿಯರ ಬಾಲ ಮಂದಿರದಲ್ಲಿ ಪುರ್ನವಸತಿ ಕಲ್ಪಿಸುವ ಪ್ರಕ್ರಿಯೆ ಮುಂದುವರಿದಿದೆ.





Ads on article

Advertise in articles 1

advertising articles 2

Advertise under the article