ಶೀಘ್ರವೇ ಪರಶುರಾಮ ಮೂರ್ತಿ ಸ್ಥಾಪನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್( Video)
Monday, January 26, 2026
ಕಾರ್ಕಳದ ಥೀಂ ಪಾರ್ಕ್ ನಲ್ಲಿ ಶೀಘ್ರವೇ ಪರಶುರಾಮ ಮೂರ್ತಿಯ ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಮಾಡುವುದಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಪರಶುರಾಮ ಥೀಂ ಪಾರ್ಕ್ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂಬ ಮಾಜಿ ಸಚಿವ ಸುನಿಲ್ ಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪರಶುರಾಮನನ್ನು ಕರಾವಳಿಯಲ್ಲಿ ಆರಾಧಿಸಲಾಗುತ್ತದೆ. ನಮಗೂ ಕೂಡ ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಇಷ್ಟ ಇಲ್ಲ. ಸುನೀಲ್ ಕುಮಾರ್ ಪರಶುರಾಮನ ಮೂರ್ತಿಯನ್ನು ಫೈಬರ್ ನಲ್ಲಿ ಮಾಡಿಸಿದ್ದರು. ಫೈಬರ್ ನಲ್ಲಿ ಮಾಡಿಸಿ ಕಂಚಿನ ಮೂರ್ತಿ ಎಂದು ನಂಬಿಸಿದ್ದರು. ಅವರು ಜನರ ದಿಕ್ಕು ತಪ್ಪಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಜನರನ್ನು ನಂಬಿಸಿ ಮೋಸ ಮಾಡಿದ್ದು, ರಾಜಕೀಯ ಮಾಡಿದ್ದು ಸುನೀಲ್ ಕುಮಾರ್, ಕಾಂಗ್ರೆಸ್ ನವರಿಗೆ ದೇವರ ವಿಚಾರದಲ್ಲಿ ರಾಜಕೀಯ ಮಾಡುವ ದರ್ದು ಇಲ್ಲ. ಆದಷ್ಟು ಬೇಗ ಪರಶುರಾಮ ಮೂರ್ತಿಯ ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಮಾಡ್ತೇವೆ ಎಂದರು.