ಉಡುಪಿ ಶ್ರೀಕೃಷ್ಣಮಠಕ್ಕೆ ಹಿರಿಯ ಚಲನಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಭೇಟಿ
Wednesday, February 18, 2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹಿರಿಯ ಚಲನ ಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿದರು.
ದೇವರ ದರ್ಶನದ ಬಳಿಕ ಪರ್ಯಾಯ ಶೀರೂರು ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಖ್ಯಾತ ಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಇವರು ಕೃಷ್ಣಮಠದ ಸರ್ವಜ್ಞ ಪೀಠದಲ್ಲಿ ಭೇಟಿ ಮಾಡಿದರು . ಶ್ರೀಗಳು ಫಲ ಮಂತ್ರಾಕ್ಷತೆಯನ್ನು ನೀಡಿದರು..
ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು.
