ಶೀರೂರು ಶ್ರೀಗಳಿಂದ ಕೆನರಾ ಬ್ಯಾಂಕ್ ಅಧಿಕಾರಿ, ಸಿಬ್ಬಂದಿಗಳಿಗೆ ಫಲ ಮಂತ್ರಾಕ್ಷತೆ
Tuesday, February 10, 2026
ಶೀರೂರು ಪರ್ಯಾಯ ವೇಳೆ ಸಹಕರಿಸಿದ ಕೆನರಾ ಬ್ಯಾಂಕ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಶೀರೂರು ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು.
ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ನ ಜನರಲ್ ಮ್ಯಾನೇಜರ್ ಹೆಚ್.ಕೆ ಗಂಗಾಧರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಪಬಿತ್ರ ಕುಮಾರ್ ದಾಸ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸಂಜೀವ ಕುಮಾರ್, ಸಂಜಯ್ ಖಾತ್ರಿ, ಸಂದೀಪ್ ಕುಮಾರ್ ಅಗರವಾಲ್, ಮಹಾಮಾಯಾ ಪ್ರಸಾದ್ ರಾಯ್ ಹಾಗೂ ಶೀರೂರು ಮಠದ ದಿವಾನರಾದ ಡಾ.ಉದಯ ಕುಮಾರ್ ಸರಳತ್ತಾಯ ಹಾಗೂ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಮೋಹನ್ ಭಟ್, ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.