ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಮನೆ
Thursday, February 19, 2026
ಮಂಗಳೂರಿನ ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ಬಳಿ ಮನೆಯೊಂದು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿಯಾಗಿದೆ.
ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ನಲ್ಲಿರುವ ಉದಯ ಕುಮಾರ್ ಎನ್ನುವವರಿಗೆ ಸೇರಿದ ಮನೆಯಾಗಿದ್ದು , ಇಂದು ಮುಂಜಾನೆ 3.15 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡು ಮನೆಯಲ್ಲಿ ಮಲಗಿದ್ದ ಉದಯ್ ಕುಮಾರ್ ದಂಪತಿ ಹಾಗು ಇಬ್ಬರು ಮಕ್ಕಳು ಮನೆಯಿಂದ ಹೊರಬಂದಿದ್ದಾರೆ. ಮನೆ ಸಂಪೂರ್ಣ ಹೊತ್ತಿ ಉರಿದಿದೆ. ಬೆಂಕಿ ಕಂಡು ಸ್ಥಳೀಯರು ಹಾಗು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.