-->
 ದ್ವೇಷ ಭಾಷಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

ದ್ವೇಷ ಭಾಷಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು


ದ್ವೇಷ ಭಾಷಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನುರಹಿತ ವಾರೆಂಟ್ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಟ್ವಾಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ದ್ವೇಷ ಭಾಷಣ ಮಾಡಿದ ಆರೋಪದಡಿ ಬೆಳ್ತಂಗಡಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯ ಅವರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಬಂಟ್ವಾಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ಪರವಾಗಿ ನ್ಯಾಯವಾದಿ ಸಿರಾಜುದ್ದೀನ್ ಜೋಗಿಬೆಟ್ಟು ವಾದ ಮಂಡಿಸಿದ್ದರು. 


Ads on article

Advertise in articles 1

advertising articles 2

Advertise under the article