-->
 ಡಾ.ಬಾಲಕೃಷ್ಣ ಎಸ್.ಮದ್ದೋಡಿ ಅವರಿಗೆ ಶ್ರೀ ಬಿಕ್ಷು ಲಕ್ಷ್ಮಾನಂದ ಸ್ವಾಮೀಜಿ ಸದ್ಭಾವನ ಪ್ರಶಸ್ತಿ

ಡಾ.ಬಾಲಕೃಷ್ಣ ಎಸ್.ಮದ್ದೋಡಿ ಅವರಿಗೆ ಶ್ರೀ ಬಿಕ್ಷು ಲಕ್ಷ್ಮಾನಂದ ಸ್ವಾಮೀಜಿ ಸದ್ಭಾವನ ಪ್ರಶಸ್ತಿ


ಕೇರಳ ರಾಜ್ಯದ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಅಂಗವಾಗಿ ಕೇರಳ ರಾಜ್ಯದ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಣಿಪಾಲ ತಂತ್ರಜ್ಞಾನ ಸಂಸ್ಥೆಯ ಖ್ಯಾತ ಪರಿಸರವಾದಿ ಹಾಗೂ ಸಮಾಜ ಸೇವಾ ಕಾರ್ಯಕರ್ತ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಎಸ್.ಮದ್ದೋಡಿ ಅವರಿಗೆ ಶ್ರೀ ಶ್ರೀ ಬಿಕ್ಷು ಲಕ್ಷ್ಮಾನಂದ ಸ್ವಾಮೀಜಿ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಮದಡೆನೀರು ಮಠಾಧೀಶ ಸಚ್ಚಿದಾನಂದ ಭಾರತೀ ಶ್ರೀಪಾದಂಗಳು, ಗೋನಾಳದ ರಮೇಶ ಸ್ವಾಮೀಜಿ, ಸಮ್ಮೇಳನಾಧ್ಯಕ್ಷ ನಾಡೋಜ ಡಾ.ಕೃಷ್ಣಪ್ರಸಾಧ ಕೂಡ್ಲು,ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಗೌರವಾಧ್ಯಕ್ಷ ಪ್ರದೀಪಕುಮಾರ ಕಲ್ಕೂರ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಕೆ.ಎನ್.ವೆಂಕಟರಮಣ ಹೊಳ್ಳ, ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ, ಸಂದ್ಯಾ ಬೆಕಲ್, ಪ್ರದೀಪಕುಮಾರ್ ಬೆಕಲ್, ಪಿ.ವಿ.ಪ್ರದೀಪ ಕುಮಾರ, ಶಾಂತಾ ಪುತ್ತೂರ, ಡಾ.ಸುರೇಶ ನೆಲಗುಳಿ, ಡಾ.ಗೋವಿಂದ ಕೊಳ್ಚಪೆ, ಡಾ.ತಮ್ಮನಗೌಡ್ರ ಪತ್ರಕರ್ತ ಸಿ.ವಾಯ್. ಮೆಣಸಿನಕಾಯಿ, ಶಿಕ್ಷಕ ಸಂಘದ ಮುಖಂಡ ರಾಮಕೃಷ್ಣ ಶಿರೂರ, ಗಣ್ಯರ ಸಮ್ಮುಖದಲ್ಲಿ ಇವರಿಗೆ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ads on article

Advertise in articles 1

advertising articles 2

Advertise under the article