ಉಡುಪಿ ಶ್ರೀಕೃಷ್ಣ ಮಠಕ್ಕೆ ಬಾಳೆಗಾರು ಮಠದ ಅಕ್ಷೋಭ್ಯ ರಾಮಪ್ರಿಯ ತೀರ್ಥ ಶ್ರೀಪಾದರು ಭೇಟಿ ನೀಡಿ, ದೇವರ ದರ್ಶನ ಪಡೆದರು.ಬಳಿಕ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ಶ್ರೀ ಮಠದ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.