-->
 ಸಂತೆಕಟ್ಟೆ ಮೇಲ್ಸೇತುವೆ ಇಂದಿನಿಂದ ಸಂಚಾರಕ್ಕೆ ಮುಕ್ತ(Video)

ಸಂತೆಕಟ್ಟೆ ಮೇಲ್ಸೇತುವೆ ಇಂದಿನಿಂದ ಸಂಚಾರಕ್ಕೆ ಮುಕ್ತ(Video)


ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರ ಸಂತಕಟ್ಟೆಯಲ್ಲಿ ಸುಮಾರು 27.4 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇಂದಿನಿಂದ ವಾಹನಕ್ಕೆ ಸಂಚಾರಕ್ಕೆ ಮುಕ್ತವಾಗಿದೆ. 


ಕುಂದಾಪುರ-ಉಡುಪಿ ನಡುವಿನ ಸಂಚಾರ ಸುಗಮಗೊಳಿಸುವುದು ಮತ್ತು ಸಂತೆಕಟ್ಟೆ ಜಂಕ್ಷನ್‌ನಲ್ಲಿನ ದಟ್ಟಣೆ ಕಡಿಮೆ ಮಾಡುವ ಉದ್ದೇಶವನ್ನಿಟ್ಟುಕೊಂಡು 2023ರ ಜನವರಿಯಲ್ಲಿ ಆರಂಭವಾದ ಈ ಯೋಜನೆ ಭೂಕುಸಿತದಂತಹ ತಾಂತ್ರಿಕ ಸಮಸ್ಯೆಗಳಿಂದಾಗಿ ವಿಳಂಬವಾಗಿತ್ತು. ಇಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಂತೆಕಟ್ಟೆ ಮೇಲ್ಸೇತುವೆ ಸ್ಥಳಕ್ಕೆ ತೆರಳಿ ಸಂಚಾರಕ್ಕೆ ಮುಕ್ತವಾಗಿದೆ ಎಂದು ಘೋಷಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ಸಣ್ಣ ಪುಟ್ಟ ಕಾಮಗಾರಿ ಬಾಕಿ ಇದೆ. ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ ಎಂಬ ಮಾಹಿತಿ ಇದೆ. ಬಂಡೆ ಸಿಕ್ಕಿದ ಕಾರಣ ಕಾಮಗಾರಿ ಸ್ವಲ್ಪ ತಡವಾಗಿದೆ. ಈ ಬಗ್ಗೆ ಸಲಹೆ ನೀಡಿದ, ಟೀಕೆ ಮಾಡಿದ ಎಲ್ಲರಿಗೂ ಕೃತಜ್ಞತೆ ಎಂದು ಸಂಸದ ಕೋಟ ಹೇಳಿದರು. 

ಸಂತೆಕಟ್ಟೆ ಜಂಕ್ಷನ್‌ನಲ್ಲಿಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಈ ಕಾಮಗಾರಿಯಿಂದಾಗಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಅವಲಂಬಿಸಬೇಕಾಗಿತ್ತು, ಆದರೆ ಈಗ ಹೆದ್ದಾರಿಯಲ್ಲಿ ನೇರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ದೀರ್ಘಕಾಲದಿಂದ ಇದ್ದ ಸಂಚಾರ ದಟ್ಟಣೆಗೆ ಈಗ ಮುಕ್ತಿ ಸಿಕ್ಕಂತಾಗಿದೆ. ಸರ್ವಿಸ್ ರಸ್ತೆಗಳ ಕಾಮಗಾರಿಯೂ ಪೂರ್ಣಗೊಂಡಿರುವುದರಿಂದ ಕಲ್ಯಾಣಪುರ ಮತ್ತು ಸುತ್ತಮುತ್ತಲಿನ ಸ್ಥಳೀಯ ಸಂಚಾರ ಸುಲಭವಾಗಲಿದೆ.




Ads on article

Advertise in articles 1

advertising articles 2

Advertise under the article