-->
ಸೌರ ಯುಗಾದಿ ಪ್ರಯುಕ್ತ ಉಡುಪಿ ಶ್ರೀಕೃಷ್ಣಮಠದಲ್ಲಿ ಸುವರ್ಣ ರಥೋತ್ಸವ

ಸೌರ ಯುಗಾದಿ ಪ್ರಯುಕ್ತ ಉಡುಪಿ ಶ್ರೀಕೃಷ್ಣಮಠದಲ್ಲಿ ಸುವರ್ಣ ರಥೋತ್ಸವ



ಸೌರ ಯುಗಾದಿಯ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದು ಸುವರ್ಣ ರಥೋತ್ಸವವು ನೆರವೇರಿತು. 

ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಹಾಗೂ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ನಡೆಯಿತು ಬಳಿಕ ಶ್ರೀ ಕೃಷ್ಣದೇವರ ಮುಂಭಾಗ ಚಂದ್ರ ಶಾಲೆಯಲ್ಲಿ "ಪರಾಭವ" ಸಂವತ್ಸರದ ಪಂಚಾಂಗ ಶ್ರವಣವನ್ನು ಪರ್ಯಾಯ ಮಠದ ಪುರೋಹಿತರಾದ ಸುದರ್ಶನ ಆಚಾರ್ಯರು ನಡೆಸಿದರು. ದಿವಾನರಾದ ಡಾ. ಉದಯಕುಮಾರ ಸರಳತ್ತಾಯರು ಉಪಸ್ಥಿತರಿದ್ದರು.






Ads on article

Advertise in articles 1

advertising articles 2

Advertise under the article