ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಚಿಕಿತ್ಸೆಗೆ ನೆರವಿಗೆ ಮನವಿ
Friday, April 10, 2026
ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಉಡುಪಿಯ ಮಹಿಳೆಯ ಚಿಕಿತ್ಸೆಗೆ ಸಾರ್ವಜನಿಕರಿಂದ ಆರ್ಥಿಕ ಸಹಾಯ ಕೋರಲಾಗಿದೆ.
ಉಡುಪಿ ಜಿಲ್ಲೆಯ ನಿವಾಸಿಯಾದ ರಾಜೇಶ್ವರಿ ಮೆದುಳಿನ ನರಕ್ಕೆ ಸಂಬಂಧಿಸಿದ ತೀವ್ರವಾದ ಕಾಯಿಲೆಯಿಂದ ಬಳಲುತ್ತಿದ್ದು, ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಸಲಹೆಯಂತೆ ತತ್ಕ್ಷಣ ಶಸ್ತ್ರಚಿಕಿತ್ಸೆ ನಡೆಸಬೇಕಿದ್ದು, ಅದಕ್ಕೆ ಸುಮಾರು 18ರಿಂದ 20 ಲಕ್ಷ ರೂ. ವೆಚ್ಚ ತಗುಲಲಿದೆ. ಅದನ್ನು ಭರಿಸುವಷ್ಟು ಕುಟುಂಬದ ಆರ್ಥಿಕ ಸ್ಥಿತಿ ಉತ್ತಮ ಇಲ್ಲ. ಈಗಾಗಲೇ ಕೆಲವು ದಾನಿಗಳು ಸಹಾಯ ಹಸ್ತ ಚಾಚಿದ್ದರೂ ಇನ್ನೂ ಹೆಚ್ಚಿನ ನೆರವು ಅಗತ್ಯವಿದೆ. ಸಹಾಯ ಮಾಡಲು ಇಚ್ಛಿಸುವವರು ಈ ಕೆಳಗಿನ ಬ್ಯಾಂಕ್ ಖಾತೆ ಅಥವಾ ಯುಪಿಐ ಮೂಲಕ ದೇಣಿಗೆ ನೀಡಬಹುದು ಎಂದು ಕುಟುಂಬದವರು ವಿನಂತಿಸಿಕೊಂಡಿದ್ದಾರೆ.
ಬ್ಯಾಂಕ್ ವಿವರ:
ಖಾತೆ ಸಂಖ್ಯೆ: 520101071633495, IFSC ಕೋಡ್: UBIN0902250, ಶಾಖೆ: ಮುದ್ರಾಡಿ
ಸಂಪರ್ಕ ಸಂಖ್ಯೆ: 9902518136, ಖಾತೆದಾರರ ಹೆಸರು: ರಾಘವೇಂದ್ರ ನಾಯಕ್ (ಸಹೋದರ).