-->
 ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಮಹಾ ರುದ್ರಯಾಗದ ಮಾಹಿತಿ ಕಚೇರಿ ಉದ್ಘಾಟನೆ

ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಮಹಾ ರುದ್ರಯಾಗದ ಮಾಹಿತಿ ಕಚೇರಿ ಉದ್ಘಾಟನೆ


ಕೊಡವೂರು ​ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ​ ಮೇ 14ರಿಂದ ಮೇ 20ರವರೆಗೆ ನಡೆಯಲಿರುವ ಮಹಾ ರುದ್ರಯಾಗದ​ ಮಾಹಿತಿ ಕಚೇರಿಯನ್ನು ಉಡುಪಿ ನಗರ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೆರೂರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಈ ಪುಣ್ಯ ಕಾರ್ಯದಲ್ಲಿ ಭಗವದ್ ಭಕ್ತರೆಲ್ಲರೂ  ಪಾಲ್ಗೊಳ್ಳುವ ಮೂಲಕ ಎಲ್ಲರ ಬಾಳು ಹಸನಾಗಲಿ ಎಂದು ಹಾರೈಸಿದರು. 

ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಕೊಡವೂರು , ಮಹಾರುದ್ರ ಯಾಗದ ಕಾರ್ಯಾಧ್ಯಕ್ಷ ಪ್ರಸಾದ್ ರಾಜ್ ಕಾಂಚನ್, ಕೃಷ್ಣ ಮೂರ್ತಿ ಆಚಾರ್ಯ, ಸಂಚಾಲಕರಾದ ಡಾ. ವಿಜೆಯೇಂದ್ರ  ವಸಂತ್, ಶಂಕರನಾರಾಯಣ ಭಕ್ತವೃಂದ ಅಧ್ಯಕ್ಷ ತೋಟದಮನೆ ದಿವಾಕರ  ಶೆಟ್ಟಿ, ಸುಕನ್ಯಾ ಪೂಜಾರಿ, ರಮೇಶ್ ತಿಂಗಳಾಯ, ನಂದಕಿಶೋರ್ , ಸೀತಾರಾಮ ಆಚಾರ್ಯ, ವಾದಿರಾಜ್ ಸಾಲ್ಯಾನ್, ಸೇವಾಸಮಿತಿ ಪ್ರಧಾನ ಕಾರ್ಯದರ್ಶಿ ಜನಾರ್ದನ್ ಕೊಡವೂರು, ಶ್ರೀದೇವಳದ ಉಮೇಶ್ ರಾವ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article