ಮೇ. 14-16: ಬಲಾಯಿಪಾದೆ ಶ್ರೀ ನಾರಾಯಣ ಗುರು ಉದ್ಯಾನವನದಲ್ಲಿ ಧಾರ್ಮಿಕ ಕಾರ್ಯಕ್ರಮ
Thursday, May 14, 2026
ಶ್ರೀ ನಾರಾಯಣ ಗುರು ಯುವ ವೇದಿಕೆ ವತಿಯಿಂದ ಯುವವಾಹಿನಿ ಉಡುಪಿ ಘಟಕ ,ಶ್ರೀ ರಾಮಕೃಷ್ಣ ಭಜನಾ ಮಂಡಳಿ, ಬಿಲ್ಲವ ಸೇವಾ ಸಂಘ ಕುತ್ಪಾಡಿ , ಬೊಲ್ಜೆ ಶ್ರೀ ಬ್ರಹ್ಮ ಬೈದರ್ಕಳ ಯಕ್ಷಗಾನ ಮಂಡಳಿ,ಉದ್ಯಾವರ ಇವರಿಂದ ಮೇ. 14ರಿಂದ 16ರವರೆಗೆ ಬಲಾಯಿಪಾದೆಯ ಶ್ರೀ ನಾರಾಯಣ ಗುರು ಉದ್ಯಾನವನದಲ್ಲಿ ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ಮೇ.14ರಂದು ಸಂಜೆ 6:30ಕ್ಕೆ ಯುವವಾಹಿನಿ (ರಿ) ಉಡುಪಿ ಇವರಿಂದ ಸದ್ಭಕ್ತಿ ,ಸಂದೇಶ ,ಸಮೃದ್ಧಿ - ಗುರು ಸತ್ಸಂಗ. ಮೇ. 15 ರ ಸಂಜೆ 6:30ಕ್ಕೆ ಶ್ರೀ ರಾಮಕೃಷ್ಣ ಭಜನಾ ಮಂಡಳಿ ,ಬಿಲ್ಲವ ಸೇವಾ ಸಂಘ ಕುತ್ಪಾಡಿ ಇದರ ಸದಸ್ಯರಿಂದ ಭಜನಾ ಕಾರ್ಯಕ್ರಮ, ಮೇ.16 ರ ಸಂಜೆ 6 ಗಂಟೆಗೆ ಶ್ರೀ ಬ್ರಹ್ಮ ಬೈದರ್ಕಳ ಯಕ್ಷಗಾನ ಕಲಾ ಮಂಡಳಿ , ಬೊಳ್ಜೆ,ಉದ್ಯಾವರ ಇದರ ಸದಸ್ಯರಿಂದ ಮತ್ತು ಅತಿಥಿ ಕಲಾವಿದರಿಂದ ಶ್ರೀ ಶನೀಶ್ವರ ಮಹಾತ್ಮೆ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷರು ಮತ್ತು ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.jpeg)