ಮಂಗಳೂರಿಗೆ ಆಗಮಿಸಿದ ಸಚಿವ ಹೆಚ್.ಕೆ ಪಾಟೀಲ್ ಗೆ ಅದ್ದೂರಿ ಸ್ವಾಗತ
Wednesday, May 06, 2026
ಕರಾವಳಿ ಪ್ರವಾಸದಲ್ಲಿರುವ ರಾಜ್ಯ ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಅವರು ಮಂಗಳೂರಿಗೆ ಆಗಮಿಸಿದ್ದು, ಕಾಂಗ್ರೆಸ್ ಮುಖಂಡರು ಸಚಿವರನ್ನು ಸ್ವಾಗತಿಸಿದರು.
ಸಚಿವ ಹೆಚ್.ಕೆ ಪಾಟೀಲ್ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಕಾಂಗ್ರೆಸ್ ಮುಖಂಡರು ಬರಮಾಡಿಕೊಂಡರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ಅಶೋಕ್ ಕುಮಾರ್ ಕೊಡವೂರು, ಎಂ.ಎ ಗಫೂರ್, ಹರಿಪ್ರಸಾದ್ ರೈ, ಪ್ರಶಾಂತ್ ಜತ್ತನ್ ಮೊದಲಾದವರು ಇದ್ದರು.
