-->
 ಜೂ.29: ಸಂಜೆ 4 ಗಂಟೆಗೆ ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ, ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಜೂ.29: ಸಂಜೆ 4 ಗಂಟೆಗೆ ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ, ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ


ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕಾರ್ಕಳ ಪೊಲೀಸ್ ಇಲಾಖೆ ಆಶ್ರಯದಲ್ಲಿ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ ಸಹಯೋಗದೊಂದಿಗೆ ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರವು ಜೂನ್ 29 ಸೋಮವಾರ ಸಂಜೆ 4 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಸಭಾಭವನ ನಡೆಯಲಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ಗಳ ನೇರ ನೇಮಕಾತಿ ಮೂಲಕ 3395 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026 ರ ಜುಲೈ 3 ಕೊನೆಯ ದಿನಾಂಕವಾಗಿದ್ದು, ಈ ಭಾಗದ ಹೆಚ್ಚಿನ ಯುವಕ ಯುವತಿಯರು ಪೊಲೀಸ್ ಇಲಾಖೆಯಲ್ಲಿ ಆಯ್ಕೆ ಗೊಳ್ಳಬೇಕೆಂಬ ಉದ್ದೇಶದಿಂದ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಪೊಲೀಸ್ ಇಲಾಖೆಯ ಹಿರಿಯ, ಅನುಭವಿ ಅಧಿಕಾರಿಗಳಿಂದ ಮಾಹಿತಿ  ನೀಡಲಾಗುವುದು. 

ಯುವಕ, ಯುವತಿಯರು ವಿದ್ಯಾರ್ಥಿಗಳು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ಮತ್ತು ಕಾರ್ಕಳ ಡಿ ವೈ ಎಸ್ ಪಿ ವಿಜಯ ಪ್ರಸಾದ್ ಹಾಗೂ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫ್ ತಿಳಿಸಿದ್ದಾರೆ. 

Ads on article

Advertise in articles 1

advertising articles 2

Advertise under the article