ಪ್ರಿಯಾಂಕ್ ಖರ್ಗೆಗೆ ಪೊಲೀಸ್, ಖಾದರ್ ತೆಕ್ಕೆಗೆ ಆರೋಗ್ಯ
Friday, June 05, 2026
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸಹಿತ ಬುಧವಾರ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಖಾತೆ ಬಯಸಿದ್ದ ರಾಮಲಿಂಗಾ ರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆಯ ಜವಾಬ್ದಾರಿ ನೀಡಲಾಗಿದೆ. ಕಂದಾಯ ಇಲಾಖೆ ಬಯಸಿದ್ದ ಕೃಷ್ಣ ಭೈರೇಗೌಡ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ವಹಿಸಲಾಗಿದೆ.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಕಂದಾಯ ಮತ್ತು ಯುವ ಸಬಲೀಕರಣ ಇಲಾಖೆ, ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ ಇಲಾಖೆ,
ಸಚಿವ ಕೆ.ಜೆ. ಜಾರ್ಜ್ ಅವರಿಗೆ ಇಂಧನ ಮತ್ತು ಪ್ರವಾಸೋಧ್ಯಮ ಖಾತೆ, ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಭೈರತಿ ಸುರೇಶ್ ಅವರಿಗೆ ಸಾರಿಗೆ ಇಲಾಖೆ ನೀಡಲಾಗಿದೆ.
ಪ್ರಿಯಾಂಕ್ ಖರ್ಗೆ - ಗೃಹ ಮತ್ತು ಐಟಿಬಿಟಿ, ಡಾ. ಯತೀಂದ್ರ ಸಿದ್ದರಾಮಯ್ಯ - ನಗರಾಭಿವೃದ್ದಿ, ಹಿಂದುಳಿದ ಕಲ್ಯಾಣ, ಯುಟಿ ಖಾದರ್ - ಆರೋಗ್ಯ, ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ, ಎಂಬಿ ಪಾಟೀಲ್ - ಬೃಹತ್ ಕೈಗಾರಿಕೆ, ಕೆ.ಎಚ್. ಮುನಿಯಪ್ಪ - ಆಹಾರ, ಈಶ್ವರ್ ಖಂಡ್ರೆ - ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ,
ಡಾ.ಶರಣ ಪ್ರಕಾಶ್ ಪಾಟೀಲ್ ಅವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ವಹಿಸಲಾಗಿದೆ.