ಆ.9: ರಾಜ್ಯ ಮಟ್ಟದ ಭಾಷಣ ಸ್ಪರ್ಧೆ, ಗುರು ಸಾಮರಸ್ಯ ಜಾಥಾದ ಆಮಂತ್ರಣ ಪತ್ರಿಕೆ ಬಿಡುಗಡೆ
Saturday, August 08, 2026
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ನ ಜಯಂತೋತ್ಸವದ ಪ್ರಯುಕ್ತ ರಾಜ್ಯ ಮಟ್ಟದ ಭಾಷಣ ಸ್ಪರ್ಧೆ ಹಾಗೂ ಗುರು ಸಾಮರಸ್ಯ ಜಾಥಾದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಆ. 9ರಂದು ಭಾನುವಾರ ಮಧ್ಯಾಹ್ನ 2:30ಕ್ಕೆ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ವಿವಿಧ ಸಮಾಜ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಆಗಮಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರು, ಗೌರವಾಧ್ಯಕ್ಷರು, ಪದಾಧಿಕಾರಿಗಳು ತಿಳಿಸಿದ್ದಾರೆ.