ಪತ್ರಕರ್ತ ಶ್ರೀಕಾಂತ್ ಮೇಲೆ ಹಲ್ಲೆ, ಕೊಲೆ ಬೆದರಿಕೆ: ಎಫ್ಐಆರ್ ದಾಖಲು
Friday, August 21, 2026
ಕನ್ನಡ ಪ್ರಭ ಪತ್ರಿಕೆಯ ವರದಿಗಾರರಾದ ಶ್ರೀಕಾಂತ್ ಅವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿತ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರು, ಈ ಹಿಂದೆ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರಾಗಿದ್ದ ಸಂದರ್ಭದಲ್ಲಿ ಒಳರೋಗಿಗಳಿಂದ ಚಿಕಿತ್ಸೆಯ ಸಮಯದಲ್ಲಿ ಹಣ ಪಡೆಯಲಾಗುತ್ತಿದೆ ಎಂಬ ಕುರಿತು ಶ್ರೀಕಾಂತ್ ಅವರು ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ್ದಕ್ಕೆ ದ್ವೇಷಗೊಂಡು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ತನಿಖೆಯ ಬಳಿಕ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.