ಉಡುಪಿ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಲು ಸಚಿವ ರಿಜ್ವಾನ್ ಅರ್ಷದ್ ನಿಗದಿ
Friday, August 14, 2026
ಸ್ವಾತಂತ್ರ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನಡೆಸುವ ಸಚಿವರುಗಳ ಪರಿಷ್ಕೃತ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸರಕಾರದ ಕಾರ್ಯದರ್ಶಿ ವೀರಭದ್ರ ಹಂಚಿನಾಳ್ ಅವರು ಆದೇಶಿಸಿರುವ ಪಟ್ಟಿಯಂತೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಹಿಂದಿನ ಆದೇಶದಂತೆ ಉಡುಪಿಯಲ್ಲಿ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವ ಕೆ. ಎಸ್. ಬಸವಂತಪ್ಪ ಅವರು ಧ್ವಜಾರೋಹಣ ನೆರವೇರಿಸುವುದೆಂದು ಪ್ರಕಟಿಸಲಾಗಿತ್ತು. ಇದೀಗ ಬಸವಂತಪ್ಪ ಅವರು ವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣ ನಡೆಸಲಿದ್ದಾರೆ ನಿಗದಿ ಮಾಡಲಾಗಿದೆ.