ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇರಳ ರಾಜ್ಯಸಭಾ ಸದಸ್ಯ ಸದಾನಂದ ಮಾಸ್ಟರ್ ಭೇಟಿ
Wednesday, September 09, 2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇರಳದ ರಾಜ್ಯಸಭಾ ಸದಸ್ಯ ಹಾಗೂ ಆರ್ಎಸ್ಎಸ್ನ ಪ್ರಚಾರಕರಾದ ಸದಾನಂದ ಮಾಸ್ಟರ್ ಅವರು ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಅವರು ಸದಾನಂದ ಮಾಸ್ಟರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಶ್ರೀ ಕೃಷ್ಣ ಮಠದ ಪ್ರಸಾದ ನೀಡಿ ಗೌರವಿಸಿದರು. ಈ ವೇಳೆ ಮಠದ ಪ್ರಮುಖರು ಉಪಸ್ಥಿತರಿದ್ದರು.
