-->
ರಾಮನ ಆದರ್ಶಗಳು ಕೌಟುಂಬಿಕ ಶಾಂತಿ, ಸಾಮಾಜಿಕ ಸಾಮರಸ್ಯ, ದೇಶದ ಏಕತೆಗೆ ಸಹಕಾರಿ: ಥಾವರ್ ಚಂದ್ ಗೆಹ್ಲೋಟ್

ರಾಮನ ಆದರ್ಶಗಳು ಕೌಟುಂಬಿಕ ಶಾಂತಿ, ಸಾಮಾಜಿಕ ಸಾಮರಸ್ಯ, ದೇಶದ ಏಕತೆಗೆ ಸಹಕಾರಿ: ಥಾವರ್ ಚಂದ್ ಗೆಹ್ಲೋಟ್


ರಾಮನ ಆದರ್ಶಗಳು ಕುಟುಂಬದಲ್ಲಿ ಶಾಂತಿ, ಸಮಾಜದಲ್ಲಿ ಸಾಮರಸ್ಯ ಹಾಗೂ ದೇಶದ ಏಕತೆಯನ್ನು ಬಲಪಡಿಸುತ್ತವೆ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.


ಎರ್ಮಾಳಿನಲ್ಲಿ ಉಡುಪಿಯ ರಾಮಕಥಾ ಸಮಿತಿ ವತಿಯಿಂದ ಆಯೋಜಿಸಿದ್ದ ಪೂಜ್ಯ ಸಂತ ಶ್ರೀ ಮುರಾರಿ ಬಾಪುಜಿ ಅವರ ‘ರಾಮಕಥಾ’ ಕಾರ್ಯಕ್ರಮದಲ್ಲಿ ಕರ್ನಾಟಕದ ಗೆಹ್ಲೋಟ್ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ಶ್ರೀಕೃಷ್ಣನ ಮೇಲಿನ ಭಕ್ತಿಯ ನಿರಂತರ ಹರಿವು ಇರುವ ಪವಿತ್ರ ಉಡುಪಿಯ ನೆಲದಲ್ಲಿ ಪೂಜ್ಯ ಮುರಾರಿ ಬಾಪು ಅವರಿಂದ ರಾಮಕಥೆಯನ್ನು ಆಲಿಸುವ ಅವಕಾಶ ದೊರೆತಿರುವುದು ಸಂತೋಷದ ಸಂಗತಿ ಎಂದ ಅವರು ಕಾರ್ಯಕ್ರಮ ಆಯೋಜಿಸಿದ ಶ್ರೀ ಪ್ರವೀಣ್ ಕಾಂಜಿ ತನ್ನಾ ಹಾಗೂ ಉಡುಪಿಯ ರಾಮಕಥಾ ಸಮಿತಿಗೆ ಕೃತಜ್ಞತೆ ಸಲ್ಲಿಸಿದರು.

ಭಾರತೀಯ ಧರ್ಮ, ಸಂಸ್ಕೃತಿ, ಆಧ್ಯಾತ್ಮಿಕತೆ ಹಾಗೂ ಜೀವನ ಮೌಲ್ಯಗಳ ಸಂದೇಶವನ್ನು ವಿಶ್ವದಾದ್ಯಂತ ಪಸರಿಸುವ ಅಗತ್ಯವಿದೆ. ನಮ್ಮ ಸನಾತನ ಪರಂಪರೆಯು “ವಸುಧೈವ ಕುಟುಂಬಕಂ” ಮತ್ತು “ಸರ್ವೇ ಭವಂತು ಸುಖಿನಃ” ಎಂಬ ಸಾರ್ವತ್ರಿಕ ಸಂದೇಶವನ್ನು ಸಾರಿದೆ. ಪೂಜ್ಯ ಸಂತರು ಮತ್ತು ಮಹಾತ್ಮರು ಈ ಮಹಾನ್ ಪರಂಪರೆಯನ್ನು ವಿಶ್ವದಾದ್ಯಂತ ಪಸರಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ತಮ್ಮ ಸರಳ, ಸುಲಭ ಹಾಗೂ ಪರಿಣಾಮಕಾರಿ ರಾಮಕಥೆಯ ಮೂಲಕ ಪೂಜ್ಯ ಮುರಾರಿ ಬಾಪುಜಿ ಅವರು ಶ್ರೀರಾಮನ ಆದರ್ಶಗಳು, ಪ್ರೀತಿ, ಕರುಣೆ, ಸತ್ಯ ಮತ್ತು ಸಾಮರಸ್ಯದ ಸಂದೇಶವನ್ನು ದೇಶ-ವಿದೇಶಗಳಲ್ಲಿ ಪಸರಿಸುತ್ತಿರುವುದು ಶ್ಲಾಘನೀಯ ಎಂದು ರಾಜ್ಯಪಾಲರು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ಪ್ರವೀಣ್ ಕಾಂಜಿ ತನ್ನಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




Ads on article

Advertise in articles 1

advertising articles 2

Advertise under the article